ಸೆಕ್ಯೂರಿಟಿ ಗಾರ್ಡ್ ನಾಪತ್ತೆ
ಉಳ್ಳಾಲ: ಸೆಕ್ಯೂರಿಟಿ ವೃತ್ತಿ ಮಾಡುತ್ತಿದ್ದ ವ್ಯಕ್ತಿಯೊಬ್ಬರು ರಾತ್ರಿ ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾ ಗಿದ್ದು, ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಕುಜುಮಗದ್ದೆ ನಿವಾಸಿ ದುರ್ಗಾ ಪ್ರಸಾದ್ ಶೆಟ್ಟಿ (52) ಎಂಬವರೇ ನಾಪತ್ತೆಯಾದವರು. ಅವರು ಸೆಕ್ಯೂರಿಟಿ ಕೆಲಸಕ್ಕೆಂದು ಮಂಗಳೂರಿಗೆ ಹೋದವರು ಹೋದವರು ರವಿವಾರ ಮಧ್ಯಾಹ್ನ ಮನೆಗೆ ಬಂದಿದ್ದರು. ರಾತ್ರಿ ಮನೆ ಮಂದಿಯಲ್ಲಿ ಕಸ ಬಿಸಾಡಿ ಬರುತ್ತೇನೆ ಎಂದು ಹೇಳಿ ಹೋದವರು ಮತ್ತೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಅವರ ಪತ್ನಿ ಉಷಾ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Next Story