ಜಿ.ಪಂ. ಅಧ್ಯಕ್ಷರಿಂದ ಸೇತುವೆ ಕಾಮಗಾರಿ ಪರಿಶೀಲನೆ
ಉಡುಪಿ, ಫೆ.27: ಉದ್ಯಾವರ ಗ್ರಾಪಂ ವ್ಯಾಪ್ತಿಯ ಜಾರುಕುದ್ರುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಕುರಿತು ಸ್ಥಳೀಯ ಗ್ರಾಮಸ್ಥರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಉಡುಪಿ ಜಿಪಂ ಅಧ್ಯಕ್ಷ ದಿನಕರಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದೇ ವೇಳೆ ಸಂಬಂಧಪಟ್ಟ ಇಲಾಖಾಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿದ ಅವರು, ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕ ಉಪಯೊೀಗಕ್ಕೆ ಒದಗಿಸುವಂತೆ ಸೂಚಿಸಿದರು.
ಅಂಗನವಾಡಿಗೆ ಭೇಟಿ: ಇದೇ ಸಂದರ್ಭದಲ್ಲಿ ಜಿಪಂ ಅಧ್ಯಕ್ಷರು ಉದ್ಯಾವರ ಗ್ರಾಪಂ ವ್ಯಾಪ್ತಿಯ ಮಡ್ಡಲಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಂಗನವಾಡಿ ಕೇಂದ್ರದ ಆಹಾರ ದಾಸ್ತಾನು ಕೊಠಡಿ, ಮಕ್ಕಳಿಗೆ ನೀಡಲಾಗುವ ಆಹಾರ ಪದಾರ್ಥಗಳ ಮಾಹಿತಿ ಪಡೆದು, ಮೂಲಭೂ ಸೌಕರ್ಯಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಉದ್ಯಾವರ ಗ್ರಾಪಂ ಸದಸ್ಯರಾದ ರಾಜೇಶ್ ಕುಂದರ್, ಶಾಂತರಾಜ್, ಲಕ್ಷ್ಮಣ್ ಪಿತ್ರೋಡಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Next Story