ತುಂಬೆ ಅಣೆಕಟ್ಟಿಗೆ ಸಚಿವ ಬಿ.ಎ. ಬಸವರಾಜು ಭೇಟಿ
ಮಂಗಳೂರು, ಫೆ. 28: ರಾಜ್ಯದ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ಅವರು ಇಂದು ಮಂಗಳೂರಿಗೆ ಆಗಮಿಸಿದ್ದು, ನಂತರ ತುಂಬೆ ಅಣೆಕಟ್ಟಿಗೆ ಭೇಟಿ ನೀಡಿ ಪರಿಶೀಲಿಸಿದರು.
ತುಂಬೆ ಅಣೆಕಟ್ಟಿನಲ್ಲಿ ಪ್ರಸ್ತುತ ನೀರಿನ ಒಳಹರಿವು ಇರುವುದಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಅಗತ್ಯವಿದ್ದಲ್ಲಿ ಕುಡಿಯುವ ನೀರಿನ ರೇಶನಿಂಗ್ ವ್ಯವಸ್ಥೆಯನ್ನು ಆರಂಭಿಸುವಂತೆಯೂ ಸೂಚನೆ ನೀಡಿದರು.
ಈ ಸಂದರ್ಭ ಮಾಜಿ ಮೇಯರ್ ಭಾಸ್ಕರ ಕೆ. ಉಪಸ್ಥಿತರಿದ್ದರು. ಪಾಲಿಕೆಯ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಜಂಟಿ ಆಯುಕ್ತ ಡಾ. ಸಂತೋಷ್ ಕುಮಾರ್, ಹಿರಿಯ ಅಧಿಕಾರಿಗಳಾದ ಗಣೇಶ್, ನರೇಶ್ ಶೆಣೈ ಉಪಸ್ಥಿರಿದ್ದು ಸಚಿವರಿಗೆ ಮಾಹಿತಿ ನೀಡಿದರು.