ಪ್ರಾಥಮಿಕ ಮಾಹಿತಿಯಲ್ಲಿ ಕೊರೋನ ಪಾಸಿಟಿವ್ ಸಾಬೀತಾಗಿದೆ: ಜಿಲ್ಲಾಧಿಕಾರಿ ಜಗದೀಶ್
ಉಡುಪಿಯಲ್ಲಿ ಮೊದಲ ಪ್ರಕರಣ
ಜಗದೀಶ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಓರ್ವ ವ್ಯಕ್ತಿಗೆ ಪ್ರಾಥಮಿಕ ಮಾಹಿತಿಯಲ್ಲಿ ಕೊರೋನ ಪಾಸಿಟಿವ್ ಸಾಬೀತಾಗಿದೆ. ನನಗೆ ಇನ್ನೂ ವೈದ್ಯಕೀಯ ವರದಿ ತಲುಪಿಲ್ಲ. ರಾಜ್ಯದ ನೋಡೆಲ್ ಅಧಿಕಾರಿಯೊಂದಿಗೆ ಮಾತನಾಡಿದ್ದು, ಡಾ. ಅರುಂಧತಿ ಚಂದ್ರಶೇಖರ್ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಕೊರೋನ ಪಾಸಿಟಿವ್ ವ್ಯಕ್ತಿಯ ಚಲನವಲನಗಳನ್ನು ಟ್ರ್ಯಾಕ್ ಮಾಡುತ್ತಿದ್ದೇವೆ. ಆತ ಬಂದ ವಿಮಾನದ ಬಗ್ಗೆ ಕೂಡ ಪರಿಶೀಲನೆ ನಡೆಸಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜೊತೆ ಸಂಪರ್ಕದಲ್ಲಿದ್ದೇನೆ. ಆ ವ್ಯಕ್ತಿ ಏಳು ದಿನದಿಂದಲೂ ಕೂಡ ನಮ್ಮ ನಿಗಾದಲ್ಲೇ ಇದ್ದು, ಮಡದಿ ಮತ್ತು ಮಗುವಿನ ಜೊತೆ ಕೂಡ ಸಂಪರ್ಕದಲ್ಲಿ ಇರಲಿಲ್ಲ. ಮನೆಯಿಂದ ಜಿಲ್ಲಾಸ್ಪತ್ರೆಗೆ ಅವರು ಒಬ್ಬರೇ ಕಾರಿನಲ್ಲಿ ಬಂದಿದ್ದಾರೆ. ವೈದ್ಯಕೀಯ ವರದಿಯಲ್ಲಿ ಕರೋನ ದೃಢವಾದರೆ ರೋಗಿಯನ್ನು ಕೆಎಂಸಿಗೆ ಶಿಫ್ಟ್ ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಹೇಳಿಕೆ ನೀಡಿದ್ದಾರೆ.
Next Story