ಕೋಮು ಪ್ರಚೋದನಕಾರಿ ಪೋಸ್ಟ್ : ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು
ಬೆಳ್ತಂಗಡಿ : ತಾಲೂಕಿನಲ್ಲಿ ಕೊರೋನ ರೋಗಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದಲ್ಲಿ ಅಶಾಂತಿ ಹರಡಲು ಹಾಗೂ ಇಸ್ಲಾಂ ನಿಂದನೆ ಮಾಡಿರುವ ಬಗ್ಗೆ ಬೆಳ್ತಂಗಡಿ ಹಾಗೂ ವೇಣೂರು ಠಾಣೆಗಳಿಗೆ ದೂರು ನೀಡಲಾಗಿದೆ.
ಇಂದಬೆಟ್ಟು ನಿವಾಸಿ ರಾಜೇಶ ಹಾಗೂ ನಿರ್ಮಲ್ ಹಾಗೂ ರೂಪೇಶ್ ಎಂಬವರ ವಿರುದ್ಧ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ದೂರು ಸ್ವೀಕರಿಸಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಇದೇ ರೀತಿ ಹೊಸಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಂಜಿಲಬೀಡು ಮನೆಯ ಗೋಪಾಲ ಮೂಲ್ಯ ಎಂಬವರ ವಿರುದ್ಧ ದೂರು ನೀಡಲಾಗಿದೆ.
ಪೋಲೀಸರು ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.
Next Story