ಎಪಿಎಂಸಿಯಲ್ಲಿ ವರ್ತಕರಿಗೆ ಮೂಲ ಸೌಕರ್ಯ ಕಲ್ಪಿಸಲು ಆದೇಶ
ಮಂಗಳೂರು, ಎ.8: ದ.ಕ.ಜಿಲ್ಲಾಡಳಿತ ಆದೇಶದಂತೆ ಮಂಗಳೂರು ಸೆಂಟ್ರಲ್ ಮಾರ್ಕೆಟ್ನಲ್ಲಿ ನಡೆಯುತ್ತಿರುವ ಹಣ್ಣು ಮತ್ತು ತರಕಾರಿ ವ್ಯಾಪಾರ ವನ್ನು ತಕ್ಷಣದಿಂದಲೇ ಬೈಕಂಪಾಡಿ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗಿದೆ. ಅದರಂತೆ ಲೈಸನ್ಸ್ ಪಡೆದ ವರ್ತಕರಿಗೆ ಎಪಿಎಂಸಿಯು ಗೋದಾಮು ವ್ಯವಸ್ಥೆ, ಹರಾಜುಕಟ್ಟೆ ವ್ಯವಸ್ಥೆ, ಕುಡಿಯುವ ನೀರು ಮತ್ತು ವ್ಯಾಪಾರ ವಹಿವಾಟಿಗೆ ಪೂರಕವಾದ ಎಲ್ಲಾ ಮೂಲಭೂತ ಸೌಲಭ್ಯ ಗಳನ್ನು ತಾತ್ಕಾಲಿಕವಾಗಿ ಮಾಡಿಕೊಡಲು ಹಾಗೂ ಸೂಕ್ತ ಮೇಲ್ವಿಚಾರಣೆ ಮಾಡಲು ಮಂಗಳೂರು ಎಪಿಎಂಸಿಗೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಆದೇಶಿಸಿದ್ದಾರೆ.
Next Story