ಪ್ರಧಾನಿ ಕೇರ್ ಫಂಡ್ಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷರಿಂದ ದೇಣಿಗೆ
ಮಂಗಳೂರು, ಮೇ 9: ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಮುಹಮ್ಮದ್ ಮಸೂದ್ ಅವರು ಪ್ರಧಾನಮಂತ್ರಿ ಕೇರ್ ನಿಧಿಗೆ 5 ಲಕ್ಷ ರೂ. ದೇಣಿಗೆಯ ಚೆಕ್ನ್ನು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಶನಿವಾರ ಹಸ್ತಾಂತರಿಸಿದರು.
ಮಸೂದ್ ಅವರ ಸಹೋದರ ಹಾಗೂ ಅನಿವಾಸಿ ಉದ್ಯಮಿ ಕೆ.ಎಸ್. ನಿಸಾರ್ ಅಹ್ಮದ್ ಈ ದೇಣಿಗೆಯನ್ನು ಪಿಎಂ ಕೇರ್ಸ್ ಫಂಡ್ಗೆ ನೀಡಿದ್ದಾರೆ.
ಈ ಸಂದರ್ಭ ಬಿಜೆಪಿ ನಾಯಕ ರವಿಶಂಕರ್ ಮಿಜಾರ್, ಡಾ. ಆರೀಫ್ ಮಸೂದ್, ಹಾಜಿ ಅಬ್ದುರ್ರಝಾಕ್, ಮಾಸ್ಟರ್ ಫ್ಲವರ್ಸ್ ಫಕೀರಬ್ಬ, ಮುಹಮ್ಮದ್ ಹನೀಫ್ ಮತ್ತಿತರರಿದ್ದರು.
Next Story