ಹೆಬ್ರಿ, ಮೇ 21: ಅನಾರೋಗ್ಯದಿಂದ ಬಳಲುತ್ತಿದ್ದ ಕಬ್ಬಿನಾಲೆ ಗ್ರಾಮದ ಬಾಕ್ಯಾರು ನಿವಾಸಿ ಬಾಬು ಶೆಟ್ಟಿಗಾರ್ (85) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 20ರಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ಛಾವಡಿಯ ಮರದ ಜಂತಿಗೆ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.