ಕೆಪಿಸಿಸಿ ಅಧ್ಯಕ್ಷರ ಪ್ರಮಾಣವಚನ ಕಾರ್ಯಕ್ರಮ: ಪೂರ್ವಭಾವಿ ಸಭೆ
ಮಂಗಳೂರು, ಮೇ 25: ಕೆಪಿಸಿಸಿ ಅಧ್ಯಕ್ಷರ ಪ್ರಮಾನವಚನ ಕಾರ್ಯಕ್ರಮದ ಸಿದ್ಧತೆಗಾಗಿ ಪೂರ್ವಭಾವಿ ಸಭೆಯು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ. ಹರೀಶ್ ಕುಮಾರ್ರ ಅಧ್ಯಕ್ಷತೆಯಲ್ಲಿ ಸೋಮವಾರ ಡಿಸಿಸಿ ಕಚೇರಿಯಲ್ಲಿ ಜರುಗಿತು.
ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಡಿಸಿಸಿ ಕಚೇರಿ, ಬ್ಲಾಕ್ ಕಾಂಗ್ರೆಸ್ ಕಚೇರಿ, ಜಿಲ್ಲೆಯ ಎಲ್ಲ ಗ್ರಾಮ ಹಾಗೂ ಮಹಾನಗರ ಪಾಲಿಕೆಯ 60 ವಾರ್ಡ್ಗಳಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಐವನ್ ಡಿಸೋಜ, ಮಾಜಿ ಶಾಸಕರಾದ ಮೊಯ್ದಿನ್ ಬಾವ, ಶಕುಂತಳಾ ಶೆಟ್ಟಿ, ಪಕ್ಷದ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಮಿಥುನ್ ರೈ, ಮನಪಾ ವಿಪಕ್ಷ ನಾಯಕ ಅಬ್ದುರ್ರವೂಫ್ ಹಾಗೂ ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕಗಳ ಅಧ್ಯಕ್ಷರು, ಮನಪಾ ಸದಸ್ಯರು, ಮನಪಾ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಬ್ಲಾಕ್ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ಜಿಪಂ ಸದಸ್ಯರು, ತಾಪಂ ಅಧ್ಯಕ್ಷರು ಪಾಲ್ಗೊಂಡಿದ್ದರು.