ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನಿಂದ ರಕ್ತದಾನ ಶಿಬಿರ
ಮಂಗಳೂರು, ಮೇ 26: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಮತ್ತು ಕೆಎಂಸಿ ಆಸ್ಪತ್ರೆಯ ಆಶ್ರಯದಲ್ಲಿ ನಗರದ ಕೋಡಿಯಾಲ್ ಬೈಲ್ ನಲ್ಲಿರುವ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ಮಂಗಳವಾರ ರಕ್ತದಾನ ಶಿಬಿರ ನಡೆಯಿತು.
ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಶಾಸಕ ವೇದವ್ಯಾಸ ಕಾಮತ್ ಶಿಬಿರ ಉದ್ಘಾಟಿಸಿದರು. ಮೇಯರ್ ದಿವಾಕರ್ ಪಾಂಡೇಶ್ವರ್, ಟ್ರಸ್ಟ್ ನ ಪ್ರಮುಖರಾದ ಹನುಮಂತ ಕಾಮತ್, ಮಂಗಲ್ಪಾಡಿ ನರೇಶ್ ಶೆಣೈ, ಚೇತನ್ ಕಾಮತ್, ನರೇಶ್ ಪ್ರಭು, ಕೆಎಂಸಿ ಬ್ಲಡ್ ಬ್ಯಾಂಕ್ ಆಫೀಸರ್ ಭವಾನಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.
Next Story