ವೈದ್ಯರ, ಸಿಬ್ಬಂದಿಗಳ ನೇಮಕಾತಿಗೆ ನೇರ ಸಂದರ್ಶನ
ಮಂಗಳೂರು, ಮೇ 26: ಕೊರೋನ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ಅಗತ್ಯವಿರುವ ವ್ಶೆದ್ಯರು, ಸಿಬ್ಬಂದಿಗಳನ್ನು ನೇಮಿಸಲು ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
1.ವೈದ್ಯರು/ತಜ್ಞರು - 3 ಹುದ್ದೆ, ವಿದ್ಯಾರ್ಹತೆ-ಎಂಬಿಬಿಎಸ್/ಯಾವುದೇ ತಜ್ಞತೆ (ಸರಕಾರದಿಂದ ಮಾನ್ಯತೆ ಪಡೆದ ವಿವಿಯಿಂದ ಪದವಿ ಪಡೆದಿರಬೇಕು)
2. ಶುಶ್ರೂಷಕರು -9 ಹುದ್ದೆ, ವಿದ್ಯಾರ್ಹತೆ- ರಾಜ್ಯ ಸರಕಾರದಿಂದ ನೋಂದಾಯಿತ ಸಂಸ್ಥೆಗಳಿಂದ ಜಿಎನ್ಎಂ/ಬಿಎಸ್ಸಿ ನರ್ಸಿಂಗ್ ಪದವಿ ಪಡೆದಿರಬೇಕು.
3. ಪ್ರಯೋಗ ಶಾಲಾ ತಜ್ಞರು- 4 ಹುದ್ದೆ, ವಿದ್ಯಾರ್ಹತೆ -ಕರ್ನಾಟಕ ಅರೆವೈದ್ಯಕೀಯ ಮಂಡಳಿಯಿಂದ 2 ಅಥವಾ 3 ವರ್ಷಗಳ ಕಿ.ವೈಪ್ರ.ಶಾ ತಂತ್ರಜ್ಞಾನ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು.
4. ಗ್ರೂಪ್ ಡಿ -6 ಹುದ್ದೆ, ವಿದ್ಯಾರ್ಹತೆ ಎಸೆಸ್ಸ್ಸೆಲ್ಸಿ ತೇರ್ಗಡೆಯಾಗಿರಬೇಕು.
ಈ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ 6 ತಿಂಗಳು ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಮೇ 30 ರಂದು ಪೂ.11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಮಾಹಿತಿಗಾಗಿ ದೂ.ಸಂ: 0824-2423672ನ್ನು ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕುಂಟುಬ ಕಲ್ಯಾಣ ಅಧಿಕಾರಿಗಳ ಪ್ರಕಟನೆ ತಿಳಿಸಿದೆ.