ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ ಅರ್ಜಿ ಆಹ್ವಾನ
ಉಡುಪಿ, ಮೇ 27: 2020-21ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಪಿಎಂಇಜಿಪಿ)ಯಡಿ ಉಡುಪಿ ಜಿಲ್ಲೆಯಲ್ಲಿ ಸ್ವಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಯುವಜನತೆಗೆ ಸ್ವಂತ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜನೆಯನ್ನು ಜಾರಿಗೊಳಿಸಲಾಗುತ್ತಿದೆ.
ಈ ಯೋಜನೆಯಲ್ಲಿ ನಿರುದ್ಯೋಗಿ ಯುವಕ/ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ 25 ಲಕ್ಷ ರೂ. ಉತ್ಪಾದನೆ ಚಟುವಟಿಕೆ ಮತ್ತು 10 ಲಕ್ಷ ರೂ. ಆಯ್ದ ಸೇವಾ ಘಟಕಕ್ಕೆ ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಸ್ಥಾಪನೆ, ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ.25ರಿಂದ 35ರವರೆಗೆ ಸಹಾಯಧನ ನೀಡಲಾಗುವುದು.
ಉತ್ಪಾದನಾ ಘಟಕವಾಗಿದ್ದಲ್ಲಿ 10 ಲಕ್ಷ ರೂ. ಮತ್ತು ಸೇವಾ ಘಟಕವಾಗಿದ್ದಲ್ಲಿ 5 ಲಕ್ಷ ರೂ.ಗಳಿಗಿಂತ ಮೇಲ್ಪಟ್ಟ ಯೋಜನಾ ವೆಚ್ಚಗಳನ್ನೊಳ ಗೊಂಡ ಘಟಕ ಗಳನ್ನು ಸ್ಥಾಪಿಸುವವರು ಕನಿಷ್ಟ 8ನೇ ತರಗತಿ ಉತ್ತಿರ್ಣರಾಗಿರಬೇಕು. ಅರ್ಜಿದಾರರಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ನಿರುದ್ಯೋಗಿ ಯುವಕ/ಯುವತಿಯರು ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸುವಾಗ ಫೋಟೊ, ಯೋಜನಾ ವರದಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜನಸಂಖ್ಯೆ ಪ್ರಮಾಣಪತ್ರ ಹಾಗೂ ವಿದ್ಯಾಭ್ಯಾಸದ ದಾಖಲಾತಿಗಳನ್ನು ಅಪ್ಲೋಡ್ ಮಾಡಿದ ನಂತರ ಅರ್ಜಿಯನ್ನು ಪ್ರಿಂಟ್ ಮಾಡಿ ಸಂಬಂದಪಟ್ಟ ದಾಖಲಾತಿಗಳೊಂದಿಗೆ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ(ಕೆಐಬಿ), ಬಿ 305, ಬಿ ಬ್ಲಾಕ್, 2ನೇ ಮಹಡಿ, ಜಿಲ್ಲಾ ಆಡಳಿತ ಕಛೆರಿಗಳ ಸಂಕೀರ್ಣ ರಜತಾದ್ರಿ, ಮಣಿಪಾಲ, ಉಡುಪಿ ಸಲ್ಲಿಸಬೇಕು ಹಾಗೂ ದೂರವಾಣಿ: 0820-2574855 ಇಲ್ಲಿ ಹೆಚ್ಚಿನ ಮಾಹಿತಿಗಳನ್ನು ಪಡೆಯಬಹುದು ಎಂದು ಕೆಐಬಿ ಪ್ರಕಟಣೆ ತಿಳಿಸಿದೆ.