ಮಂಗಳೂರು, ಮೇ 29: ಮನೆ ಸಮೀಪ ನಿಲ್ಲಿಸಿದ್ದ ಕಾರಿನ ಗಾಜನ್ನು ಪುಡಿಗೈದು ಹಾನಿ ಮಾಡಿರುವ ಘಟನೆ ಕುದ್ರೋಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಅಶ್ರಫ್ ಕಿನಾರ ಎಂಬವರ ಕುದ್ರೋಳಿಯಲ್ಲಿರುವ ತನ್ನ ಮನೆ ಸಮೀಪ ನಿಲ್ಲಿಸಿದ್ದ ಕಾರಿನ ಗಾಜನ್ನು ಗುರುವಾರ ರಾತ್ರಿ ಕಿಡಿಗೇಡಿಗಳು ಹಾನಿಗೈದಿದ್ದಾರೆ.
ಈ ಬಗ್ಗೆ ಬಂದರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
Next Story