ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಧಾರ್ಮಿಕ ಕಾರ್ಯಕ್ರಮ ಮುಂದೂಡಿಕೆ
ಮಂಗಳೂರು : ಕೊರೋನ ಲಾಕ್ ಡೌನ್ ಹಿನ್ನೆಲೆ ಕೇಂದ್ರ ಸರ್ಕಾರದ ಸೂಚನೆಯಂತೆ ಜೂನ್ 8ರ ಬಳಿಕ ದೇವಸ್ಥಾನಗಳನ್ನು ತೆರೆಯಲು ಅನುವು ಮಾಡಿಕೊಡಲಾಗಿದೆ.
ಹೀಗಾಗಿ ಜೂನ್ 1ರಂದು ಕುದ್ರೋಳಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಧನ್ವಂತರಿ ಹೋಮ ಮತ್ತು ಶತ ಸೀಯಾಳಾಭಿಷೇಕವನ್ನು ಮುಂದೂಡ ಲಾಗಿದೆ. ಜೂನ್ 8ರ ಬಳಿಕವೇ ದೇವಸ್ಥಾನ ಭಕ್ತರ ಪ್ರವೇಶಕ್ಕೆ ತೆರೆದುಕೊಳ್ಳಲಿದೆ ಎಂದು ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.
Next Story