ಚಿಕ್ಕಮುಡ್ನೂರು: ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಸಾವು
ಪುತ್ತೂರು, ಜೂ.3: ಅಡಿಕೆಗೆ ಔಷಧಿ ಸಿಂಪರಣೆ ಮಾಡುತ್ತಿದ್ದ ವೇಳೆ ಅಡಿಕೆ ಮರದಿಂದ ಬಿದ್ದು ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಎಂಬಲ್ಲಿ ಮಂಗಳವಾರ ನಡೆದಿದೆ.
ತಾಲೂಕಿನ ಬನ್ನೂರು ಗ್ರಾಮದ ನೀರ್ಪಾಜೆ ನಿವಾಸಿ ದಿ. ಮಾಣಿ ಎಂಬವರ ಪುತ್ರ ಉಮೇಶ್(37) ಮೃತಪಟ್ಟ ವ್ಯಕ್ತಿ.
ಬನ್ನೂರು ಮತ್ತು ಕೆಮ್ಮಾಯಿ ಪರಿಸರದಲ್ಲಿ ಅಡಿಕೆ ತೆಗೆಯುವ ಮತ್ತು ಅಡಿಕೆ ಮರಗಳಿಗೆ ಔಷಧಿ ಸಿಂಪರಣೆ ಕಾಯಕ ನಡೆಸುತ್ತಿದ್ದ ಉಮೇಶ್ ಅಡಿಕೆ ಮರಗಳಿಗೆ ಔಷಧಿ ಸಿಂಪರಣೆ ಮಾಡುತ್ತಿದ್ದ ವೇಳೆಯಲ್ಲಿ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಆವೇಳೆಗೆ ಅವರು ಮೃತಪಟ್ಟಿದ್ದರು. ಮೃತರು ಪತ್ನಿ, ಮಕ್ಕಳು ಹಾಗೂ ಸಹೋದರರನ್ನು ಅಗಲಿದ್ದಾರೆ.
ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story