ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ರವಿಶಂಕರ್ ಮಿಜಾರ್ ನೇಮಕ
ಮಂಗಳೂರು, ಜೂ.3: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡ) ಅಧ್ಯಕ್ಷರನ್ನಾಗಿ ರವಿಶಂಕರ್ ಮಿಜಾರ್ ಅವರನ್ನು ನೇಮಿಸಿ ರಾಜ್ಯ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಾಭಿವೃದ್ಧಿ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.
ಮೂಡಾದ ಅಧ್ಯಕ್ಷರನ್ನಾಗಿ ರವಿಶಂಕರ್ ಮಿಜಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಕಗೊಳಿಸಿ ಪ್ರಾಧಿಕಾರದ ಸರಕಾರದ ಅಧೀನ ಕಾರ್ಯದರ್ಶಿ ಸಿ.ಎಸ್. ಶಿವಕುಮಾರಸ್ವಾಮಿ ಆದೇಶಿಸಿದ್ದಾರೆ.
Next Story