ಬೆಳ್ತಂಗಡಿ: ವಿದ್ಯುತ್ ಆಘಾತದಿಂದ ಮೆಸ್ಕಾಂ ಪವರ್ ಮ್ಯಾನ್ ಮೃತ್ಯು
ಬೆಳ್ತಂಗಡಿ, ಜೂ.27: ಕರ್ತವ್ಯದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಆಘಾತಕ್ಕೊಳಗಾಗಿ ಮೆಸ್ಕಾಂ ಪವರ್ ಮ್ಯಾನ್ ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಪಿಲಿಗೂಡು ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಕಲ್ಲೇರಿ ಮೆಸ್ಕಾಂ ಉಪ ವಿಭಾಗದ ಪವರ್ ಮ್ಯಾನ್ ಬಸವರಾಜು ಕಟ್ಟಪರ(25)ಮೃತಪಟ್ಟವರಾಗಿದ್ದಾರೆ. ಇವರು ಮೂಲತಃ ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ನಿವಾಸಿಯಾಗಿದ್ದರು.
ಹೈ ಟೆನ್ಶನ್ ತಂತಿಯ ಡಿಸ್ಕ್ ಗ್ರೌಂಡ್ನ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ವಿದ್ಯುತ್ ಆಘಾತದ ತೀವ್ರತೆಗೆ ಬಸವರಾಜು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story