ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಕಾರ್ಕಳ, ಜೂ.28: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದ ನಿಟ್ಟೆ ಗ್ರಾಮದ ಮದನಾಡು ನಿವಾಸಿ ಜಯ ದೇವಾಡಿಗ(50) ಎಂಬವರು ಜೂ.27ರಂದು ರಾತ್ರಿ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು: ಮದ್ಯ ಸೇವಿಸುವ ಚಟ ಹೊಂದಿದ್ದ ಅಚ್ಚಡ ರೈಲ್ವೇ ಗೇಟ್ ಬಳಿಯ ನಿವಾಸಿ ಪಿ.ಶೇಖರ್(57) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.27ರಂದು ಮೂಡಬೆಟ್ಟು ಗ್ರಾಮದ ಗಾಂಧಿನಗರ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಚಿತಗಾರದ ಬಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ತೆಂಕನಿಡಿಯೂರು ಕೆಳಾ ರ್ಕಳಬೆಟ್ಟುವಿನ ಮಿಥುನ್ (39) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.26ರಿಂದ ಜೂ.28ರ ಮಧ್ಯಾವಧಿಯಲ್ಲಿ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story