ಉಡುಪಿ: ಕೋವಿಡ್ಗೆ ಮೂರನೇ ಬಲಿ
ಮುಂಬೈಯಿಂದ ಬಂದ ವ್ಯಕ್ತಿ ರವಿವಾರ ಸಾವು
ಸಾಂದರ್ಭಿಕ ಚಿತ್ರ
ಉಡುಪಿ, ಜೂ.30: ಉಡುಪಿ ಜಿಲ್ಲೆಯಲ್ಲಿ ನೋವೆಲ್ ಕೊರೋನ ವೈರಸ್ (ಕೋವಿಡ್-19)ಗೆ ಮೂರನೇ ಬಲಿಯನ್ನು ಪಡೆದಿದೆ. ಕೇವಲ ನಾಲ್ಕು ದಿನಗಳ ಹಿಂದಷ್ಟೇ ಮುಂಬೈಯಿಂದ ಊರಿಗೆ ಬಂದಿದ್ದ 48 ವರ್ಷ ಪ್ರಾಯದ ಪುರುಷರೊಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ.
ಇವರು ಮುಂಬಯಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಳೆದ ರವಿವಾರ ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಅವರ ಮನೆಗೆ ಆಗಮಿಸಿದ್ದರು. ನಂತರ ಅಲ್ಲಿ ಅವರು ಸಾವನ್ನಪ್ಪಿದ್ದಾರೆ.
ಯಕೃತ್, ಮಧುಮೇಹ ಹಾಗೂ ಇತರ ಕಾಯಿಲೆಯಿಂದ ಬಳಲುತಿದ್ದ ಅವರು ನಾಲ್ಕು ದಿನಗಳ ಹಿಂದೆ ಪತ್ನಿ ಹಾಗೂ ಮಗಳೊಂದಿಗೆ ಊರಿಗೆ ಬಂದಿದ್ದರು. ರವಿವಾರ ಅವರು ಕಾಯಿಲೆಯಿಂದ ಮೃತಪಟ್ಟಿದ್ದು, ಬಳಿಕ ಅವರ ಗಂಟಲುದ್ರವ ಮಾದರಿಯನ್ನು ಪರೀಕ್ಷೆಗೆ ಪಡೆದಾಗ ಇಂದು ಅದು ಪಾಸಿಟಿವ್ ಫಲಿತಾಂಶ ನೀಡಿದೆ.
ಇದರೊಂದಿಗೆ ಅವರ ಹೆಂಡತಿ ಮತ್ತು ಮಗಳೂ ಪಾಸಿಟಿವ್ ಆಗಿದ್ದು, ಅವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
Next Story