ಕೊರೋನ ವಾರಿಯರ್ಸ್ಗಳಿಗೆ ಎನರ್ಜಿ ಡ್ರಿಂಕ್ಸ್ ಹಸ್ತಾಂತರ
ಉಡುಪಿ, ಜು.1: ಭಾರತೀಯ ರೆಡ್ಕ್ರಾಸ್ ಸಂಸ್ಥೆ ರಾಜ್ಯ ಶಾಖೆಗೆ ಐಟಿಸಿ ಲಿಮಿಟೆಡ್ನಿಂದ ಕೋವಿಡ್-19ರ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಲ್ಲಿರುವವರಿಗೆ, ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದವರಿಗೆ ವಿತರಿಸಲು ಎನರ್ಜಿ ಡ್ರಿಂಕ್ಸ್ಗಳನ್ನು ಉಡುಪಿ ಜಿಲ್ಲಾ ಘಟಕಕ್ಕೆ ನೀಡಿದ್ದು, ರೆಡ್ಕ್ರಾಸ್ ಭವನದಲ್ಲಿ ಬುಧವಾರ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಜಿ ಜಗದೀಶ್ ಈ ಎನರ್ಜಿ ಡ್ರಿಂಕ್ಸ್ಗಳನ್ನು ಹಸ್ತಾಂತ ರಿಸಿದರು.
ಎನರ್ಜಿ ಡ್ರಿಂಕ್ಸ್ ಗಳನ್ನು ರೆಡ್ಕ್ರಾಸ್ ತಾಲೂಕು ಘಟಕಗಳಾದ ಬೈಂದೂರು, ಕಾರ್ಕಳ, ಬ್ರಹ್ಮಾವರ ಶಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಘಟಕ ಉಪಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ, ಗೌರವ ಖಚಾಂಜಿ ಟಿ.ಚಂದ್ರಶೇಖರ್,ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ ಮತ್ತು ಆಡಳಿತ ಮಂಡಳಿ ಸದಸ್ಯರುಗಳು ಉಪಸ್ಥಿತರಿದ್ದರು.
ಯುವ ರೆಡ್ಕ್ರಾಸ್ ಘಟಕದ ಡೈರೆಕ್ಟರ್ ಜಯರಾಮ್ ಆಚಾರ್ಯ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿ, ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ. ಸ್ವಾಗತಿಸಿದರು. ಗೌರವ ಖಚಾಂಜಿ ಟಿ.ಚಂದ್ರಶೇಖರ್ ವಂದಿಸಿದರು.