ಮಂಗಳೂರು: ತಂಡದಿಂದ ಮೂವರ ಮೇಲೆ ತಲವಾರು ದಾಳಿ
ಮಂಗಳೂರು, ಜು.14: ಕಾರು ಮತ್ತು ಬೈಕಿನಲ್ಲಿ ಬಂದ ತಂಡವೊಂದು ಮೂವರು ಯುವಕರ ಮೇಲೆ ತಲವಾರಿನಿಂದ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿ ನಗರದ ಬಜಿಲಕೇರಿ ಎಂಬಲ್ಲಿ ನಡೆದಿರುವುದು ವರದಿಯಾಗಿದೆ.
ದಾಳಿಯಿಂದ ಗಾಯಗೊಂಡ ಯುವಕರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷದಿಂದ ಮಾರಕಾಯುಧದೊಂದಿಗೆ ಆಗಮಿಸಿದ ತಂಡ ದಾಳಿ ನಡೆಸಿದೆ ಎಂದು ದೂರಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರೂ ಅವರ ಸಮ್ಮುಖದಲ್ಲೇ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದಾರೆನ್ನಲಾಗಿದೆ.
ಬಳಿಕ ಪರಿಸ್ಥಿತಿ ನಿಯಂತ್ರಿಸಿದ ಪೊಲೀಸರು ದುಷ್ಕರ್ಮಿಗಳನ್ನು ವಶಕ್ಕೆ ಪಡೆದಿದ್ದಾರೆ.
Next Story