ಅಡ್ಯಾರ್ ಕೊಲೆ ಪ್ರಕರಣ: ಆರೋಪಿಗಳ ಬಂಧನ
ಮಂಗಳೂರು: ನಗರದ ಹೊರವಲಯದ ಅಡ್ಯಾರ್ನಲ್ಲಿ ಶುಕ್ರವಾರ ರಾತ್ರಿ ನಡೆದ ಗ್ರಾಪಂ ಸದಸ್ಯ ಅಡ್ಯಾರ್ ಪದವು ನಿವಾಸಿ ಯಾಕೂಬ್ (46) ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೂವರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿಗಳಾದ ಮುಹಮ್ಮದ್ ಶಾಕೀರ್, ಹನೀಫ್ ಹಾಗೂ ಅಹ್ಮದ್ ಶಾಕೀರ್ ಬಂಧಿತರು.
ಆರೋಪಿಗಳನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿ, ಕೊರೋನ ಪರೀಕ್ಷೆಗೆ ಗಂಟಲ ದ್ರವ ಕಳುಹಿಸಲಾಗಿದೆ. ವರದಿ ನೆಗೆಟಿವ್ ಬಂದರೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಶಾಕೀರ್ ಮತ್ತು ತಂಡ ಮನೆಯಲ್ಲಿದ್ದ ಯಾಕೂಬ್ನನ್ನು ಕರೆ ಮಾಡಿ ಕರೆಸಿ ಗಂಭೀರ ಹಲ್ಲೆ ನಡೆಸಿತ್ತು. ಗಾಯಗೊಂಡ ಯಾಕೂಬ್ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆಗೆ ದಾಖಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದರು. ಇದರಿಂದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಭಾಗಿಯಾದ ಇನ್ನೂ ಕೆಲವರು ತಲೆಮರೆಸಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.