ಉಡುಪಿ: ಅಪರಿಚಿತ ನಾಲ್ಕು ಅನಾಥ ಶವಗಳ ಅಂತ್ಯಸಂಸ್ಕಾರ
ಉಡುಪಿ, ಜು.15: ನಾಲ್ಕು ಅನಾಥ ಮೃತದೇಹಗಳ ಅಂತ್ಯಸಂಸ್ಕಾರವನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಮಂಗಳವಾರ ಬೀಡಿನಗುಡ್ಡೆ ಹಿಂದು ರುದ್ರಭೂಮಿಯಲ್ಲಿ ಅಂತಿಮ ಗೌರವಗಳೊಂದಿಗೆ ನೆರವೇರಿಸಿದರು.
ನಗರ ಪೊಲೀಸ್ ಠಾಣೆಯ ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಸಮಕ್ಷಮದಲ್ಲಿ ನಡೆದ ಈ ಕಾರ್ಯಕ್ಕೆ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ಗಣೇಶ್, ಸುಮಿತ್ರಾ ರಾವ್ ಸಹಕರಿಸಿದರು.
ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣದಿಂದ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಅಪರಿಚಿತ ಪುರುಷ ರೋಗಿಗಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಈ ನಾಲ್ಕು ಮೃತದೇಹಗಳ ವಾರಸುದಾರರು ಕಾಲಮಿತಿ ಕಳೆದರೂ ಬಾರದೆ ಇರುವುದರಿಂದ, ಕಾನೂನಿನಂತೆ ದಫನದ ಮೂಲಕ ಅಂತ್ಯಸಂಸ್ಕಾರ ನಡೆಸಲಾಯಿತು.
Next Story