ಮಂಜನಾಡಿ: ಟೆಂಪೋ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು
ಕೊಣಾಜೆ: ಮಂಜನಾಡಿಯ ಅಲ್ ಮದೀನ ಸಮೀಪದ ರಸ್ತೆಯಲ್ಲಿ ದ್ವಿಚಕ್ರ ವಾಹನ ಹಾಗೂ ಟೆಂಪೋ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.
ಮೃತಪಟ್ಟ ಯುವಕನನ್ನು ಮಂಜನಾಡಿ ತೌಡುಗೋಳಿ ಕ್ರಾಸ್ ನ ಮುಹಮ್ಮದ್ ಮುಸ್ತಫಾ ಅವರ ಪುತ್ರ ಮುಹಮ್ಮದ್ ರಮೀಝ್ (19) ಎಂದು ಗುರುತಿಸಲಾಗಿದೆ.
ರಮೀಝ್ ಅವರು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದು, ಇಂದು ಮಧ್ಯಾಹ್ನದ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡ ಯುವಕನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story