ಮಂಗಳೂರು: ಟಿಪ್ಪು ಪಠ್ಯ ಕೈಬಿಡುವ ನಿರ್ಧಾರ ಖಂಡಿಸಿ ಸಿಎಫ್ಐ ಧರಣಿ
ಮಂಗಳೂರು, ಜು.29: ಪಠ್ಯಪುಸ್ತಕದಿಂದ ಟಿಪ್ಪು ಪಠ್ಯ ಕೈ ಬಿಡುವ ರಾಜ್ಯ ಸರಕಾರದ ನಿರ್ಧಾರವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಇಂಡಿಯಾದ ಮಂಗಳೂರು ಜಿಲ್ಲಾ ಸಮಿತಿಯ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಬುಧವಾರ ಧರಣಿ ನಡೆಯಿತು.
ರಾಜ್ಯ ಸಮಿತಿ ಸದಸ್ಯ ಇಮ್ರಾನ್ ಪಿಜೆ, ಮುಹಮ್ಮದ್ ಸಾದಿಕ್ ಮತ್ತು ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ಅಬ್ದುಲ್ ಬಾಸಿತ್ ಮಾತನಾಡಿದರು. ಈ ಸಂಧರ್ಭ ಜಿಲ್ಲಾಧ್ಯಕ್ಷ ಹಸನ್ ಸಿರಾಜ್, ಕಾರ್ಯದರ್ಶಿ ಮುನೀರ್ ಬಜಾಲ್ ಉಪಸ್ಥಿತರಿದ್ದರು.