ಕೆರೆಕಾಡು: ಬಾವಿಗೆ ಬಿದ್ದು ಯುವಕ ಮೃತ್ಯು
ಮುಲ್ಕಿ, ಆ.1: ಯುವಕನೋರ್ವ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಾಯರು ಕೆರೆಕಾಡು ಎಂಬಲ್ಲಿ ಶನಿವಾರ ಬೆಳಗ್ಗೆ ಬೆಳಕಿಗೆ ಬೆಳಕಿಗೆ ಬಂದಿದೆ.
ಸ್ಥಳೀಯ ನಿವಾಸಿ ವಿಶ್ವನಾಥ ದೇವಾಡಿಗ(28) ಮೃತಪಟ್ಟವರು. ಇವರು ನಿನ್ನೆ ರಾತ್ರಿ ಸ್ಥಳೀಯ ಭಜನಾ ಮಂದಿರದಲ್ಲಿ ವರಮಹಾಲಕ್ಷ್ಮೀ ವ್ರತದ ಪೂಜೆ ಮುಗಿಸಿ ಮನೆ ಹಿಂದಿರುಗುವ ಸಂದರ್ಭ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿದ್ದರೆನ್ನಲಾಗಿದೆ.
ಸ್ಥಳಕ್ಕೆ ಮುಲ್ಕಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Next Story