ಆಹಾರ ಧಾನ್ಯದ ಕಿಟ್, ಪ್ರೊತ್ಸಾಹ ಧನ ವಿತರಣೆ
ಉಡುಪಿ, ಆ. 4: ಕೋವಿಡ್-19ರ ಸಂದಿಗ್ಧ ಪರಿಸ್ಥಿತಿಯಲ್ಲಿ ನೆರವು ನೀಡುವ ಸಲುವಾಗಿ ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜ್ನ ಅತಿಥಿ ಉಪನ್ಯಾಸಕರು ಹಾಗೂ ಕಚೇರಿಯ ಸಿಬ್ಬಂದಿಗಳಿಗೆ ಆಹಾರಧಾನ್ಯದ ಕಿಟ್ ಮತ್ತು ಪ್ರೋತ್ಸಾಹಧನವನ್ನು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಲಾಲಾಜಿ ಆರ್ ಮೆಂಡನ್ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತರುವ ಭರವಸೆ ನೀಡಿದರು. ಸ್ಥಳೀಯ ಉದ್ಯಮಿ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ದಯಾನಂದ ಮಲ್ಯ, ಅತಿಥಿ ಉಪನ್ಯಾಸಕರು ಮತ್ತು ಕಚೇರಿ ಸಿಬ್ಬಂದಿಗಳಿಗೆ ಆಹಾರ ಧಾನ್ಯದ ಕಿಟ್ನ್ನು ಕೊಡುಗೆಯಾಗಿ ನೀಡಿ ಶುಭ ಹಾರೈಸಿದರು.
ಉಡುಪಿ ತಾಲೂಕು ಪಂಚಾಯತ್ ಸದಸ್ಯೆ ಸಂಧ್ಯಾ ಕಾಮತ್ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ನಿಕೇತನ ಪ್ರಾಸ್ತಾವಿಕವಾಗಿ ಮಾತನಾಡಿ, ಆಹಾರಧಾನ್ಯದ ಕಿಟ್ ಹಾಗೂ ಪ್ರೋತ್ಸಾಹಧನವನ್ನ ನೀಡಿದ ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ದಾನಿಗಳ ಸಮಾಜಮುಖಿ ಕಾರ್ಯವನ್ನು ಶ್ಲಾಸಿದರು.
ಸುಭಾಷ್ ಹೆಚ್ ಕೆ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುಜಯಾ ಕೆ. ವಂದಿಸಿದರು.