ಉಡುಪಿ; ಮದ್ಯ ಮಾರಾಟ ನಿಷೇಧ
ಉಡುಪಿ, ಆ.4: ಬುಧವಾರ ಆ.5ರಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆಯುವ ಭೂಮಿಪೂಜೆಯ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್ಶಾಪ್ಗಳಲ್ಲಿ ಮದ್ಯ ಮಾರಾಟವನ್ನು ಆ.4ರ ರಾತ್ರಿ 8 ಗಂಟೆಯಿಂದ ಆ.6ರ ಬೆಳಿಗ್ಗೆ 6 ಗಂಟೆಯವರೆಗೆ ಅಬಕಾರಿ ಸನ್ನದು ಳನ್ನು ಮುಚ್ಚಲು ಆದೇಶಿಸಲಾಗಿದೆ.
ಈ ದಿನಗಳಂದು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಒಣದಿನ (ಡ್ರೈ ಡೇ) ಎಂದು ಘೋಷಿಸಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
Next Story