ಉಡುಪಿ: ಆರು ಗ್ರಾಪಂಗಳ ಕಸ ವಿಲೇವಾರಿ ಕುರಿತು ಸಭೆ
ಉಡುಪಿ, ಆ.12: ಉಡುಪಿ ನಗರಸಭೆಗೆ ಹೊಂದಿಕೊಂಡಿರುವ 6 ಗ್ರಾಮ ಪಂಚಾಯತ್ಗಳ ಕಸ ವಿಲೇವಾರಿ ಕುರಿತ ಸಭೆಯು ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಬುಧವಾರ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿತು.
ಈ ಆರು ಗ್ರಾಪಂಗಳ ವ್ಯಾಪ್ತಿಯಲ್ಲಿ ಒಣ ಮತ್ತು ಹಸಿ ಕಸವನ್ನು ಸ್ವ ಸಹಾಯ ಸಂಘದ ಮೂಲಕ ವೈಜ್ಞಾನಿಕವಾಗಿ ಸಂಗ್ರಹಣೆ ಮತ್ತು ವಿಲೇವಾರಿ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ಮೋಹನ್ರಾಜ್ ಹಾಗೂ 6 ಗ್ರಾಪಂಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಆಡಳಿತಾಧಿಕಾರಿ ಗಳು ಉಪಸ್ಥಿತರಿದ್ದರು.
Next Story