ನೀರುಪಾಲಾದ ವ್ಯಕ್ತಿಯ ಮೃತದೇಹ ಪತ್ತೆ
ಮಲ್ಪೆ, ಆ.12: ಕಾಲು ಜಾರಿ ಹೊಳೆಗೆ ಬಿದ್ದು ನೀರು ಪಾಲಾಗಿದ್ದ ಕಲ್ಯಾಣ ಪುರ ಮೂಡುಕುದ್ರುವಿನ ಸುಧಾಮ ಸುವರ್ಣ(65) ಎಂಬವರ ಮೃತದೇಹ ಆ.11ರಂದು ಬೆಳಗ್ಗೆ 7ಗಂಟೆ ಸುಮಾರಿಗೆ ಕೋಡಿ ಬೇಂಗ್ರೆಯ ಸ್ಮಶಾನದ ಬಳಿಯ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.
ಆ.8ರಂದು ರಾತ್ರಿ ವೇಳೆ ತೋಟದಲ್ಲಿದ್ದ ತೆಂಗಿನಕಾಯಿ ಹೆಕ್ಕಲು ಹೋಗಿದ್ದ ಇವರು, ವಿಪರೀತ ಮಳೆಯಿಂದ ಆಕಸ್ಮಿಕವಾಗಿ ಕಾಲು ಜಾರಿ ಹೊಳೆ ನೀರಿಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರಬಹುದು ಎಂದು ಶಂಕಿಸ ಲಾಗಿದೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story