ಮನೆ ಕಳವು ಆರೋಪಿಯ ಬಂಧನ: ಸೊತ್ತು ವಶ
ಕೋಟ, ಆ.12: ಬನ್ನಾಡಿಯಲ್ಲಿ ನಾಲ್ಕು ದಿನಗಳ ಹಿಂದೆ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಕೋಟ ಪೊಲೀಸರು ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಮಿತ ಶಾಂತಪ್ಪ ನಾಗನಾಸುರ್ (21) ಬಂಧಿತ ಆರೋಪಿ. ಈತನಿಂದ 23 ಸಾವಿರ ರೂ. ಮೌಲ್ಯದ ಚಿನ್ನಾಭರಣ ಹಾಗೂ 4000 ರೂ. ಮೌಲ್ಯದ 3 ಮೊಬೈಲ್ಗಳನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ.
ಈತ ಆ.8ರಂದು ಬನ್ನಾಡಿ ಗ್ರಾಮದ ಪ್ರಾಣೇಶ್ ಎಂಬವರ ಮನೆಯ ಹೆಂಚು ತೆಗೆದು ಒಳನುಗ್ಗಿ ಚಿನ್ನಾಭರಣ ಹಾಗೂ ಮೊಬೈಲ್ ಕಳವು ಗೈದಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೋಟ ಪೊಲೀಸ್ ಠಾಣಾ ಉಪ ನಿರೀಕ್ಷಕಿ ಪುಷ್ಪ ಹಾಗೂ ಸಂತೋಷ್ ಬಿ.ಪಿ. ನೇತೃತ್ವದಲ್ಲಿ ಸಿಬ್ಬಂದಿಗಳಾದ ಸುರೇಶ ಎಚ್., ಪ್ರಕಾಶ್ ಎಸ್. ಮತ್ತು ರಾಜೇಶ್ ಈ ಕಾರ್ಯಾಚರಣೆ ನಡೆಸಿದ್ದಾರೆ.
Next Story