ಉಡುಪಿ : ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾಗಿ ಸುಬ್ರಹ್ಮಣ್ಯ ಜೆ.ಎನ್.ಅಧಿಕಾರ ಸ್ವೀಕಾರ
ಉಡುಪಿ, ಆ.13: ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ರಾಗಿ ಸುಬ್ರಹ್ಮಣ್ಯ ಜೆ.ಎನ್. ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಉಡುಪಿ ನ್ಯಾಯಾಲಯಕ್ಕೆ ವರ್ಗಾವಣೆಗೊಳ್ಳುವ ಮೊದಲು ಅವರು ಬೆಂಗಳೂರಿನಲ್ಲಿ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸುತಿದ್ದರು.
ಈವರೆಗೆ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಸಿ.ಎಂ.ಜೋಷಿ ಅವರು ಬೆಳಗಾವಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ರಾಗಿ ನಿಯುಕ್ತಿಗೊಂಡಿದ್ದಾರೆ.
Next Story