ವಿದ್ಯೋದಯ ಸಮೂಹ ಸಂಸ್ಥೆಯಲ್ಲಿ ಸ್ವಾತಂತ್ರ ದಿನಾಚರಣೆ
ಉಡುಪಿ, ಆ.15: ಉಡುಪಿ ವಿದ್ಯೋದಯ ಟ್ರಸ್ಟ್ನ ಅಂಗಸಂಸ್ಥೆಗಳಾದ ವಿದ್ಯೋದಯ ಪದವಿ ಪೂರ್ವ ಕಾಲೇಜು, ವಿದ್ಯೋದಯ ಪಬ್ಲಿಕ್ ಸ್ಕೂಲ್, ಶ್ರೀಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಶ್ರೀಅನಂತೇಶ್ವರ ಹಿರಿಯ ಪ್ರಾಥಮಿಕ ಶಾಲೆ, ವಿದ್ಯೋದಯ ವಿದ್ಯಾಲಯ, ಶ್ರೀಕೃಷ್ಣ ಶಿಶುಮಂದಿರಗಳಲ್ಲಿ 74ನೇ ಸ್ವಾತಂತ್ರ ದಿನಾಚರಣೆ ಇಂದು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಾಲಿಗ್ರಾಮ ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ.ವಿವೇಕ್ ಉಡುಪ ಧ್ವಜಾರೋಹಣ ನೆರವೇರಿಸಿದರು. ಈ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮ ರ್ಯಾಂಕ್ ಗಳಿಸಿದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ಅಭಿಜ್ಞ ರಾವ್ ಅವರನ್ನು ಡಾ. ವಿವೇಕ್ ಉಡುಪ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ವಿದ್ಯೋದಯ ಟ್ರಸ್ಟ್ನ ಕಾರ್ಯಾಧ್ಯಕ್ಷಎನ್. ನಾಗರಾಜ್ ಬಲ್ಲಾಳ್, ಕಾರ್ಯದರ್ಶಿ ಕೆ. ಗಣೇಶ್ ರಾವ್, ಕೋಶಾಧಿಕಾರಿ ಪದ್ಮರಾಜ್ ಆಚಾರ್ಯ, ಟ್ರಸ್ಟ್ನ ಜೊತೆ ಕಾರ್ಯದರ್ಶಿ ರೂಪಾಬಲ್ಲಾಳ್, ಸದಸ್ಯರಾದ ಯು. ದಾಮೋದರ್ ಮತ್ತು ರಘುರಾಮ ಆಚಾರ್ಯ ಅಲ್ಲದೇ ಎಲ್ಲಾ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.