ಸುರತ್ಕಲ್: ಸ್ವಾತಂತ್ರೋತ್ಸವ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ನಿಂದ ರಕ್ತದಾನ ಶಿಬಿರ
ಮಂಗಳೂರು, ಆ.15: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಸುರತ್ಕಲ್ ಮತ್ತು ವೆನ್ಲಾಕ್ ಸರಕಾರಿ ಆಸ್ಪತ್ರೆಗಳ ಸಹಯೋಗದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರವನ್ನು ಸುರತ್ಕಲ್ನ ಕರ್ನಾಟಕ ಸೇವಾ ವೃಂದದಲ್ಲಿ ಶನಿವಾರ ಹಮ್ಮಿಕೊಳ್ಳಲಾಯಿತು.
ಪಾಪ್ಯುಲರ್ ಫ್ರಂಟ್ ಸುರತ್ಕಲ್ ವಲಯಾಧ್ಯಕ್ಷ ಹನೀಫ್ ಕಾಟಿಪಳ್ಳ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಷ್ಟ್ರೀಯ ಖಜಾಂಜಿ ಝಾಫರ್ ಫೈಜಿ, ವೆನ್ಲಾಕ್ ಆಸ್ಪತ್ರೆ ವೈದ್ಯೆ ರಂಜಿತಾ ಮಾತನಾಡಿದರು.
ಉದ್ಯಮಿ ಶುಹೈಬ್ ರಕ್ತದಾನ ಮಾಡಿ ಬಳಿಕ ಉದ್ಘಾಟಿಸಿದರು. ಈ ಸಂದರ್ಭ ಮೊಹಿಯುದ್ದೀನ್ ಜುಮಾ ಮಸ್ಜಿದ್ ಅಧ್ಯಕ್ಷ ಅಬ್ದುಲ್ ಅಝೀಝ್, ಎಸ್ಡಿಪಿಐ ಸುರತ್ಕಲ್ ವಲಯ ಕಾರ್ಯದರ್ಶಿ ಅಝರ್ , ಪಾಪ್ಯುಲರ್ ಫ್ರಂಟ್ ಸುರತ್ಕಲ್ ಏರಿಯಾ ಅಧ್ಯಕ್ಷ ನವಾಝ್ ಉಪಸ್ಥಿತರಿದ್ದರು.
ಏರಿಯಾ ಸಮಿತಿಯ ಸದಸ್ಯ ಅಬ್ದುಲ್ ಸುಬಾನ್ ಕಾರ್ಯಕ್ರಮ ನಿರೂಪಿಸಿದರು.
Next Story