ಕಾವೂರು : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ತದಾನ ಶಿಬಿರ
ಮಂಗಳೂರು : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಮ್ ಹಾಗು ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಕಾವೂರು ಶಾಂತಿನಗರ ಕೇಂದ್ರ ಮೈದಾನದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು. ಪಿಎಫ್ಐ ಕಾವೂರು ವಲಯಾಧ್ಯಕ್ಷ ನೌಶಾದ್ ಕಾವೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕೊರ್ಡಿನೇಟರ್ ಪ್ರವೀಣ್ ಕುಮಾರ್ ರಕ್ತದಾನದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 119 ಯುನಿಟ್ ರಕ್ತ ಸಂಗ್ರಹವಾಯಿತು. ಕಾರ್ಯಕ್ರಮದಲ್ಲಿ ಪಿಎಫ್ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಾವೂರು, ಕೂಳೂರು ಮಸೀದಿ ಗೌರವಾಧ್ಯಕ್ಷ ಮುಹಮ್ಮದ್ ಅಲಿ, ಕೂಳೂರು ಮಸೀದಿ ಅಧ್ಯಕ್ಷ ಹಾಜಿ ಅಬೂಬಕರ್ ಸಿದ್ದೀಕ್, ಶಾಂತಿನಗರ ಮಸೀದಿ ಅಧ್ಯಕ್ಷ ಇಬ್ರಾಹಿಂ ಸಫಾನಗರ, ಎಸ್ಡಿಪಿಐ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಸಮಿತಿ ಸದಸ್ಯ ಹನೀಫ್ ಕಾವೂರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪಿಎಫ್ಐ ಕಾವೂರು ಡಿವಿಷನ್ ಕಾರ್ಯದರ್ಶಿ ನಿಸಾರ್ ಕಾವೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.