ಗಾಳಿಮಳೆಯಿಂದ ಹೊಳೆಗೆ ಬಿದ್ದು ಯುವಕ ಮೃತ್ಯು
ಬೈಂದೂರು, ಸೆ.15: ವಿಪರೀತ ಗಾಳಿ-ಮಳೆಯಿಂದಾಗಿ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಶಿವರಾಜ(27) ಎಂದು ಗುರುತಿಸಲಾಗಿದೆ.
ಇವರು ಸೆ.13 ರಂದು ಮನೆಯಿಂದ ಕೂಲಿ ಕೆಲಸಕ್ಕೆ ಹೋಗಿದ್ದು, ಸುಮನಾವತಿ ನದಿ ದಡದಲ್ಲಿ ಮನೆಗೆ ನಡೆದುಕೊಂಡು ಬರುತ್ತಿದ್ದಾಗ ಗಾಳಿ ಮಳೆಯಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಸೆ.15ರಂದು ಬೆಳಗ್ಗೆ 8:30ರ ಸುಮಾರಿಗೆ ಉಪ್ಪುಂದ ಸುಮನಾವತಿ ನದಿಯ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story