ಬಜ್ಪೆ: ಪೌಷ್ಟಿಕ ಆಹಾರ ಮಾಸ ಕಾರ್ಯಕ್ರಮ
ಮಂಗಳೂರು, ಸೆ.16: ರಾಜ್ಯ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಬಜ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬಜ್ಪೆ ಗ್ರಾಪಂ ಇವುಗಳ ಜಂಟಿ ಆಶ್ರಯದಲ್ಲಿ ಪೌಷ್ಟಿಕ ಆಹಾರ ಮಾಸವನ್ನು ಕಾರ್ಯಕ್ರಮವು ಬಜ್ಪೆಯ ತಾರಿಕಂಬ್ಲ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಸಿರಾಜ್ ಅಹ್ಮದ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಬಳ್ಕುಂಜೆ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಶೋಭಾರಾಣಿ, ಬಜಪೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಚೇತನ್ ಭಾಗವಹಿಸಿದ್ದರು.
ಅಂಗನವಾಡಿಯ ಮೇಲ್ವಿಚಾರಕಿ ನಾಗರತ್ನ ಕಾರ್ಯಕ್ರಮ ನಿರೂಪಿಸಿದರು.
Next Story