ಪುತ್ತೂರು: ಮಹಿಳೆ ಬಾವಿಗೆ ಬಿದ್ದು ಮೃತ್ಯು
ಪುತ್ತೂರು : ಮಹಿಳೆಯೊಬ್ಬರು ಬಾವಿಗೆ ಬದ್ದು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಈಶ್ವರಮಂಗಲ ಸಾರಕೂಟೇಲು ಎಂಬಲ್ಲಿ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
ಮೂಲತ: ಪುತ್ತೂರು ತಾಲೂಕಿನ ಕಬಕ ನಿವಾಸಿಯಾಗಿದ್ದು ಪಡುವನ್ನೂರು ಗ್ರಾಮದ ಸಾರಕೂಟೇಲು ಎಂಬಲ್ಲಿ ವಾಸವಾಗಿರುವ ಗೋಪಾಲಕೃಷ್ಣ ಭಟ್ ಎಂಬವರ ಪತ್ನಿ ಲಲಿತಾ(65) ಮೃತಪಟ್ಟ ಮಹಿಳೆ.
ಮಂಗಳವಾರ ರಾತ್ರಿ ಲಲಿತಾ ಅವರು ಊಟ ಮಾಡಿ ಮಲಗಿದ್ದರು. ಬೆಳಗ್ಗೆ ಗೋಪಾಲಕೃಷ್ಣ ಅವರು ಎದ್ದು ನೋಡುವಾಗ ಲಲಿತಾ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ನಡೆಸಿದಾಗ ಅವರ ಮೃತದೇ ಮನೆಯ ಪಕ್ಕದ ಬಾವಿಯಲ್ಲಿ ಪತ್ತೆಯಾಗಿತ್ತು. ಮೃತರು ಪತಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಈಶ್ವರಮಂಗಲ ಹೊರಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story