ಸಚಿವ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಶ್ರದ್ಧಾಂಜಲಿ
ಉಡುಪಿ, ಸೆ.25: ಪಕ್ಷದ ವಿವಿಧ ಸ್ತರಗಳಲ್ಲಿ ಅತ್ಯುತ್ತಮ ರೀತಿಯಲ್ಲಿ ಜವಾಬ್ದಾರಿ ನಿರ್ವಹಿಸಿ, ಸತತ ನಾಲ್ಕು ಬಾರಿ ಸಂಸದರಾಗಿ, ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ಸಾರ್ಥಕ ಜನಸೇವೆಗೈದ ಸುರೇಶ್ ಅಂಗಡಿ ಅವರ ಪಕ್ಷ ನಿಷ್ಠೆ ಮತ್ತು ಸೇವಾ ತತ್ಪರತೆ ಅನುಕರಣೀಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದ್ದಾರೆ.
ಶುಕ್ರವಾರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ.ರವಿ ಅಮೀನ್ ಅಧ್ಯಕ್ಷತೆಯಲ್ಲಿ ಬುಧವಾರ ನಿಧನರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರಿಗೆ ಉಡುಪಿಯ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಶೃದ್ಧಾಂಜಲಿ ಸಭೆಯಲ್ಲಿ ನುಡಿ ನಮನ ಸಲ್ಲಿಸಿ ಮಾತನಾಡಿದರು.
ಉಡುಪಿ ಜಿಪಂ ಅಧ್ಯಕ ದಿನಕರ ಬಾಬು, ಜಿಲ್ಲಾ ಪ್ರ.ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಮುಖಂಡರಾದ ಶಿಲ್ಪಾ ಜಿ. ಸುವರ್ಣ, ಶ್ರೀಶ ನಾಯಕ್ ಪೆರ್ಣಂಕಿಲ, ನಳಿನಿ ಪ್ರದೀಪ್ ರಾವ್, ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ. ಅಂಚನ್, ವಿಖ್ಯಾತ್ ಶೆಟ್ಟಿ, ದಾವೂದ್ ಅಬೂಬಕರ್, ಜಗದೀಶ್ ಆಚಾರ್ಯ ಕಪ್ಪೆಟ್ಟು, ಪ್ರಭಾಕರ ಪೂಜಾರಿ, ಮಂಜುನಾಥ್ ಮಣಿಪಾಲ್ ಮೊದಲಾದವರು ಉಪಸ್ಥಿತರಿದ್ದರು