ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಕುಂದಾಪುರ, ಸೆ.26: ವಿಪರೀತ ಮದ್ಯಸೇವನೆ ಚಟ ಹೊಂದಿದ್ದ ವಕ್ವಾಡಿ ಗ್ರಾಮದ ದೇವಾಡಿಗರ ಬೆಟ್ಟು ನಿವಾಸಿ ಸುಧಾಕರ ದೇವಾಡಿಗ(40) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಸೆ.24ರಂದು ರಾತ್ರಿ ಮನೆಯ ಜಾಗದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಫುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದ ನಂದಳಿಕೆಯ ಲಚ್ಚಿಲ್ ನಿವಾಸಿ ನಾರಾಯಣ ದೇವಾಡಿಗ ಎಂಬವರ ಮಗಳು ಹಾಗೂ ತಲ ಪಾಡಿಯ ಸುರೇಂದ್ರ ಎಂಬವರ ಪತ್ನಿ ಅಕ್ಷತಾ(25) ಎಂಬವರು ತಾಯಿ ಮನೆಯಲ್ಲಿ ಯಾರು ಇಲ್ಲದ ವೇಳೆ ಸೆ.25ರಂದು ಬೆಳಗ್ಗೆ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story