ಪಂಚಾಯತ್ ಚುನಾವಣೆಗೆ ಸಮರ್ಥ ಅಭ್ಯರ್ಥಿ ಆಯ್ಕೆಗೆ ಪ್ರಮೋದ್ ಕರೆ
ಉಡುಪಿ, ಸೆ.28: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಥಳೀಯ ಚಿರಪರಿಚಿತ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಆದ್ಯ ಕರ್ತವ್ಯ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪ್ರಮೋ್ ಮಧ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಅಂಬಲ್ಪಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ರವಿವಾರ ಕಪ್ಪೆಟ್ಟಿನಲ್ಲಿ ನಡೆದ ಅಂಬಲಪಾಡಿ ಪಂಚಾಯತ್ ಮಟ್ಟದ, ಪಂಚಾಯತ್ ಚುನಾವಣೆಯ ಪೂರ್ವಭಾವಿ ಕಾರ್ಯಕರ್ತರ ಸೆಯಲ್ಲಿ ಅವರು ಮಾತನಾಡುತಿದ್ದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಅಂಬಲ್ಪಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ರವಿವಾರ ಕಪ್ಪೆಟ್ಟಿನಲ್ಲಿ ನಡೆದ ಅಂಬಲಪಾಡಿ ಪಂಚಾಯತ್ ಮಟ್ಟದ, ಪಂಚಾಯತ್ ಚುನಾವಣೆಯ ಪೂರ್ವಾವಿಕಾರ್ಯಕರ್ತರಸೆಯಲ್ಲಿ ಅವರು ಮಾತನಾಡುತಿದ್ದರು. ಕಪ್ಪೆಟ್ಟು ರವೀಶ್ ಪೂಜಾರಿ ಮನೆಯಲ್ಲಿ ಜರಗಿದ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನೆರೆ ಬಂದಾಗ ಕಿದಿಯೂರು, ಬಂಕೇರಕಟ್ಟೆ, ಮಜ್ಜಿಗೆಪಾದೆ ದಡ್ಡಿ ಮೊದಲಾದ ಪ್ರದೇಶಗಳಲ್ಲಿ ಅಧಿಕಾರಿಗಳಿಗಿಂತ ಮೊದಲೇ ನಮ್ಮ ಪಕ್ಷದ ಕಾರ್ಯಕರ್ತರು ನೆರೆ ಪೀಡಿತ ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿ ಸೇವಾ ಕಾರ್ಯವನ್ನು ಶ್ಲಾಘಿಸಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡಿ, ಇಂದಿರಾ ಗಾಂಧಿ ದೇಶದಲ್ಲಿ ’ಉಳುವವನೇ ಹೊಲದೊಡೆಯ’ ಕಾನೂನು ಜಾರಿ ಮಾಡಿದರೆ ಈ ಬಿಜೆಪಿ ಸರಕಾರ‘ಉಳ್ಳವನೇ ಹೊಲದೊಡೆಯ’ ಕಾನೂನು ತಂದು ಕೃಷಿಕರು ಬೀದಿಗೆ ಬೀಳುವ ಪರಿಸ್ಥಿತಿಗೆ ತಂದು ಹಾಕುತ್ತಿದೆ ಎಂದರು.
ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಮಾತನಾಡಿ ಈ ಬಾರಿ ಅಂಬಲಪಾಡಿ ಪಂಚಾಯತ್ನಲ್ಲಿ ಪಕ್ಷಕ್ಕೆ ಉತ್ತಮ ವಾತಾವರಣವಿದೆ. ಈ ವಾತಾವರಣವನ್ನು ಮತವಾಗಿ ಪರಿವರ್ತಿಸುವಲ್ಲಿ ಕಾರ್ಯಕರ್ತರು ಸಂಘಟಿತರಾಗಿ ಇಂದಿನಿಂದಲೇ ಕೆಲಸವನ್ನು ಪ್ರಾರಂಭಿಸಬೇಕು ಎಂದು ಕರೆ ನೀಡಿದರು. ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಅವರೂ ಮಾತನಾಡಿದರು.
ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಮಿತಿಯನ್ನು ರಚಿಸಲಾಯಿತು. ಈ ಸಂದರ್ಭ ಕೀರ್ತಿ ಶೆಟ್ಟಿ ಅಂಬಲಪಾಡಿ, ಗಣೇಶ್ ನೆರ್ಗಿ, ವೀಕ್ಷಕರಾದ ಜಯ ಪೂಜಾರಿ, ಸುರೇಂದ್ರ ಆಚಾರ್ಯ, ನಾರಾಯಣ ಕುಂದರ್, ಪಂಚಾಯತ್ನ ನಿಕಟಪೂರ್ವ ಸದಸ್ಯರಾದ ಲಕ್ಷಣ ಪೂಜಾರಿ, ಸುರೇಶ್ ಪೂಜಾರಿ, ಶಕುಂತಳ, ರೀಟಾ ಗಾಮ, ಪೀರು ಸಾಹೇಬ್, ಜೆರೊಮ್ ಅಂದ್ರಾದೆ, ಲೂಯಿಸ್ ಲೋಬೊ, ದಯಾನಂ ಪೂಜಾರಿ ಜ್ಯೋತಿ ಉಪಸ್ಥಿತರಿದ್ದರು.
ಸಾಯಿರಾಜ್ ಕೋಟ್ಯಾನ್ ಸ್ವಾಗತಿಸಿ, ರವೀಶ್ ಪೂಜಾರಿ ವಂದಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾಯದರ್ಶಿ ಜನಾರ್ದನ ಭಂಡಾರ್ಕಾರ್ ಕಾರ್ಯಕ್ರಮ ನಿರೂಪಿಸಿದರು.