ದ.ಕ.ಜಿಲ್ಲೆ: ಕೋವಿಡ್ಗೆ ಒಂಬತ್ತು ಬಲಿ, 362 ಮಂದಿಗೆ ಕೊರೋನ ಸೋಂಕು
ಮಂಗಳೂರು, ಸೆ. 29: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದಾಗಿ ಮತ್ತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಮಂಗಳವಾರ ಹೊಸದಾಗಿ 362 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ರಾಜ್ಯ ಬುಲೆಟಿನ್ ತಿಳಿಸಿದೆ.
ಜಿಲ್ಲೆಯಲ್ಲಿ 232 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್ಎಚ್ಎಂ) ಸಿಬ್ಬಂದಿಯು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಈಗಾಗಲೇ ಒಂದು ವಾರ ಪೂರೈಸಿದೆ. ಇದರಿಂದ ಮಂಗಳವಾರವೂ ದ.ಕ. ಜಿಲ್ಲೆಯ ಕೋವಿಡ್ ಬುಲೆಟಿನ್ ಪ್ರಕಟವಾಗಿಲ್ಲ.
ಕೊರೋನದಿಂದ 9 ಮಂದಿ ಮೃತಪಟ್ಟಿದ್ದು, 190 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಎನ್ಎಚ್ಎಂ ಸಿಬ್ಬಂದಿ ರಾಜ್ಯಾದ್ಯಂತ ಪ್ರತಿಭಟನೆಗೆ ಇಳಿದಿದ್ದಾರೆ. ಬೇಡಿಕೆ ಈಡೇರಿಕೆ ಬಗ್ಗೆ ಸರಕಾರದ ಮಟ್ಟದಲ್ಲಿ ಇನ್ನೂ ತೀರ್ಮಾನ ಆಗಿಲ್ಲ. ಹಾಗಾಗಿ ಜಿಲ್ಲಾ ಬುಲೆಟಿನ್ ಲಭ್ಯವಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Next Story