ತೊಕ್ಕೊಟ್ಟು: ರೈಲ್ವೇ ಹಳಿಯಲ್ಲಿ ಮೃತದೇಹ ಪತ್ತೆ
ಉಳ್ಳಾಲ : ಸರ ಕಳವು ಪ್ರಕರಣಕ್ಕೆ ಸಂಬಂಧಿಸಿ ಎರಡು ವರ್ಷಗಳಿಂದ ಜೈಲಿನಲ್ಲಿದ್ದು, ಸೋಮವಾರ ಬಿಡುಗಡೆಗೊಂಡ ವ್ಯಕ್ತಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ರೈಲ್ವೇ ಹಳಿಯಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ.
ಬಜಾಲು ನಿವಾಸಿ ರಾಜೇಶ್ (48) ಮೃತಪಟ್ಟವರು.
ಕಾವೂರು ಹಾಗೂ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿ ರಾಜೇಶ್ ಎರಡು ವರ್ಷಗಳಿಂದ ಮಂಗಳೂರು ಜೈಲಿನಲ್ಲಿದ್ದರು. ಮನೆಮಂದಿಯೂ ಜಾಮೀನಿಗೆ ಅರ್ಜಿ ಹಾಕುವ ಪ್ರಯತ್ನ ಮಾಡದೇ ಇದ್ದುದರಿಂದ ಜೈಲಿನಲ್ಲೇ ಉಳಿದುಕೊಂಡಿದ್ದರು. ನಿನ್ನೆಯಷ್ಟೇ ಬಿಡುಗಡೆಗೊಂಡು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸ್ ಠಾಣಾ ಎಸ್.ಐ ತಾರನಾಥ್ , ಹೆಚ್.ಸಿ ಮಧುಚಂದ್ರ ನೇತೃತ್ವದ ತಂಡ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.