ಬ್ರಹ್ಮಾವರ : 7ನೇ ತರಗತಿಯ ಬಾಲಕ ನೇಣುಬಿಗಿದು ಆತ್ಮಹತ್ಯೆ
ಬ್ರಹ್ಮವಾರ : ಏಳನೆ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟದ ಕಾಜ್ರಳ್ಳಿ ಜನತಾ ಕಾಲನಿಯಲ್ಲಿ ಬುಧವಾರ ನಡೆದಿದೆ.
ಮೃತ ಬಾಲಕನನ್ನು ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ವಿತಾ ಎಂಬವರ ಪುತ್ರ ತನುಷ್ (12) ಎಂದು ಗುರುತಿಸಲಾಗಿದೆ.
ತನುಷ್ 7 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು, ಕಲಿಯುವಿಕೆಯಲ್ಲಿ ಹಿಂದಿದ್ದ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಲಾಗಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story