ದಲಿತ ಯುವತಿಯ ಅತ್ಯಾಚಾರ: ಖಂಡನೆ
ಉಡುಪಿ, ಅ.1: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಪೈಶಾಚಿಕವಾಗಿ ಅತ್ಯಾಚಾರ ಮಾಡಿ, ಸಾಕ್ಷಿ ಹೇಳದಂತೆ ಯುವತಿಯ ನಾಲಗೆ ಕತ್ತರಿಸಿ, ಬಳಿಕ ಸತ್ತ ಮೇಲೆ ಮೃತದೇಹವನ್ನು ಕುಟುಂಬದವರಿಗೆ ನೋಡಲು ಬಿಡದೇ, ರಾತ್ರಿ ಹೊತ್ತಿನಲ್ಲಿ ಸರಕಾರಿ ವ್ಯವಸ್ಥೆಯನ್ನು ದುರುಪಯೋಗಪಡಿಸಿ, ಪೊಲೀಸ್ ಇಲಾಖೆ ಯುವತಿಯ ಅಂತ್ಯಕ್ರಿಯೆ ಮಾಡಿರುವಂತಹ ಘಟನೆಯನ್ನು ಕೆಪಿಸಿಸಿ ಮಾಜಿ ಕಾರ್ಯದರ್ಶಿ ವೆರೋನಿಕಾ ಕರ್ನೇಲಿಯೋ ತೀವ್ರವಾಗಿ ಖಂಡಿಸಿದ್ದಾರೆ.
ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮತ್ತು ಇಂತಹ ಹೇಯ ಕೃತ್ಯಗಳು ಮುಂದೆ ನಡೆಯಬಾರದು. ಸಂತ್ರಸ್ತ ಕುಟುಂಬಕ್ಕೆ ಸರಕಾರ ಗರಿಷ್ಠ ಮೊತ್ತದ ಪರಿಹಾರ ನೀಡುವುದರ ಜೊತೆಗೆ, ಆರೋಪಿಗಳಿಗೆ ಕಠಿಣ ಶಿಕ್ಷೆ ಜಾರಿಮಾಡುವಂತೆ ಉತ್ತರ ಪ್ರದೆಶ ಸರಕಾರವನ್ನು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ
Next Story