ಉಡುಪಿ: ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಅ.1: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುಕೆ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಪ್ರಾರಂಭಿಸಲಾ ಗಿದ್ದು, ಯೋಜನೆಯ ಅನುಷ್ಟಾನಕ್ಕಾಗಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಹ ವ್ಯಕ್ತಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳು ಜಿಲ್ಲಾ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಗಳಲ್ಲಿ ಲಭ್ಯವಿರುತ್ತವೆ. ಅರ್ಜಿಗಳನ್ನು ಪಡೆಯಲು ಅ.16 ಕೊನೆಯ ದಿನವಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರು, ಉಡುಪಿ ಇವರಿಗೆ ಅ.23ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು/ ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ ಉಡುಪಿ ಇವರನ್ನು ಸಂಪರ್ಕಿಸು ವಂತೆ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story