ರಾಹುಲ್ ಗಾಂಧಿ,ಪ್ರಿಯಾಂಕ ಗಾಂಧಿ ಬಂಧನಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಖಂಡನೆ
ಉಡುಪಿ, ಅ.1: ಉತ್ತರ ಪ್ರದೇಶದಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತೃಸ್ತ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಹತ್ರಾಸ್ಗೆ ತೆರಳುತ್ತಿದ್ದ ನಿಕಟಪೂರ್ವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರ ಕಾರನ್ನು ತಡೆದು ನಿಲ್ಲಿಸಿದಾಗ, ಕಾಲ್ನಡಿಗೆಯಲ್ಲಿಯೇ 142 ಕಿ.ಮಿ. ದೂರವನ್ನು ಕ್ರಮಿಸಲು ಮುಂದಾದ ಅವರನ್ನು ಪೊಲೀಸರು ತಡೆದು ದೈಹಿಕ ಹಲ್ಲೆ ನಡೆಸಿ ಬಂಧಿಸಿರುವುದನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ತೀವ್ರಾಗಿ ಖಂಡಿಸಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರಕಾರದ ಈ ಕ್ರಮ ಅತ್ಯಂತ ಖಂಡನೀಯ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story