ಪ್ರದೀಪ ಕುಮಾರ್ ಕಲ್ಕೂರರಿಗೆ ವಿಪ್ರ ಸಮಾಜ ಜೀವಮಾನ ಸಾಧನಾ ಪ್ರಶಸ್ತಿ
ಮಂಗಳೂರು, ಆ.4: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರರಿಗೆ ಚೆನ್ನೈನ ದ್ರಾವಿಡ ಬ್ರಾಹ್ಮಣ ಅಸೋಸಿಯೇಶನ್ ವಿಪ್ರ ಸಮಾಜದ ಜೀವಮಾನ ಸಾಧನಾ ಪ್ರಶಸ್ತಿ ಘೋಷಿಸಿದೆ.
ಸಾಮಾಜಿಕ ಹಾಗೂ ಸಾಂಸ್ಕೃತಿಕ ವಲಯದಲ್ಲಿ ಸಕ್ರಿಯರಾಗಿರುವ ಕಲ್ಕೂರರ ಅಧ್ಯಕ್ಷತೆಯಲ್ಲಿ ಬ್ರಾಹ್ಮಣ ಒಕ ್ಕೂಟದ ಆಶ್ರಯದಲ್ಲಿ ಈ ಹಿಂದೆ ಬ್ರಾಹ್ಮಣ ಸಮ್ಮೇಳನವು ಯಶಸ್ವಿಯಾಗಿ ಜರಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ತಿರುಮಲ ತಿರುಪತಿ ದೇವಸ್ಥಾನ ದಾಸ ಸಾಹಿತ್ಯ ಪ್ರೊಜೆಕ್ಟ್ ಇದರ ವತಿಯಿಂದ ಪುರಂದರಾನುಗ್ರಹ ಪುರಸ್ಕಾರ, ಉಡುಪಿ ಶ್ರೀಕೃಷ್ಣ ಮಠದಲ್ಲಿ ಕಲ್ಕೂರ ಅವರು ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸತತ ಮೂರನೇ ಬಾರಿ ಆಯ್ಕೆಗೊಂಡ ಸಂದರ್ಭ ನಗರದ ಪುರಭವನದಲ್ಲಿ ಸಾರ್ವಜನಿಕ ಅಭಿನಂದನೆಗೂ ಪಾತ್ರರಾಗಿದ್ದರು. ಪ್ರಸ್ತುತ ಸತತ ಐದನೆ ಬಾರಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಸೇವೆಗೈಯ್ಯುತ್ತಿದ್ದು, ಇತ್ತೀಚೆಗೆ ಉಡುಪಿ ಪೇಜಾವರ ಮಠದಲ್ಲಿ ಪೇಜಾವರ ಶ್ರೀಗಳ ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.
ಆಗಸ್ಟ್ 7ರಂದು ಸಂಜೆ ಚೆನ್ನೈನ ರಾಧಾಕೃಷ್ಣ ಸಲಾ (ರಸ್ತೆ)ಯಲ್ಲಿರುವ ವುಡ್ಲ್ಯಾಂಡ್ಸ್ ಸಭಾಂಗಣದಲ್ಲಿ ಜರಗಲಿರುವ ಸಮಾರಂಭದಲ್ಲಿ ಜೀವಮಾನ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಪ್ರಕಟಣೆ ತಿಳಿಸಿದೆ.