ಬಂಟ್ವಾಳ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ
ಬಂಟ್ವಾಳ, ಆ. 13: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ತಾಲೂಕಿನ ರಾಯಿ ಗ್ರಾಮದ ದಡ್ಡುವಿನ ವ್ಯಕ್ತಿಯೋರ್ವರು ತನ್ನ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಶನಿವಾರ ಸಂಭವಿಸಿದೆ.
ಇಲ್ಲಿನ ನಿವಾಸಿ ರಾಮಪ್ಪ ಪೂಜಾರಿ ಎಂಬವರ ಪುತ್ರ ಪ್ರಕಾಶ (47) ಆತ್ಮಹತ್ಯೆಗೈದವರು.
ಮೂಡುಬಿದಿರೆಯ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಅವರು ಮಾನಸಿಕ ಅಸ್ವಸ್ಥತೆಯಿಂದ ಕೆಲವು ದಿನಗಳಿಂದ ರಜೆ ಮಾಡಿ ಮನೆಯಲ್ಲಿದ್ದರು. ಇತ್ತೀಚೆಗೆ ಹೊಸ ಮನೆ ಕಟ್ಟಿಸಿದ್ದು ಮನೆಮಂದಿ ಅದರಲ್ಲಿ ವಾಸವಿದ್ದರು. ಶುಕ್ರವಾರ ರಾತ್ರಿ ಊಟದ ಬಳಿಕ ಮಲಗಿದ್ದ ಅವರು ಬೆಳಗ್ಗೆ 4 ಗಂಟೆಗೆ ಮನೆಯಲ್ಲಿ ಇರದಿರುವುದನ್ನು ಗಮನಿಸಿ ಹುಡುಕಾಡಿದಾಗ ಹಳೆಮನೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story