ಕೋಡಿ ಬ್ಯಾರೀಸ್ನಲ್ಲಿ 70ನೆ ಸ್ವಾತಂತ್ರೋತ್ಸವದ ಸಂಭ್ರಮ
ಕುಂದಾಪುರ, ಆ.15: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಇಂದು 70ನೆ ಸ್ವಾತಂತ್ರೋತ್ಸವ ಆಚರಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ನೆರೆವೇರಿಸಿದರು. ಬಳಿಕ ಮಾತನಾಡಿದ ಅವರು, ಜೀವ ಬಲಿದಾನದೊಂದಿಗೆ ಬಂದಂತಾ ಸ್ವಾತಂತ್ರ್ಯ ನಮ್ಮದು; ಸಾತಂತ್ರೋತ್ಸವದ ಸಂಭ್ರಮದೊಂದಿಗೆ ದೇಶಕ್ಕಾಗಿ ಪ್ರತಿಯೊಬ್ಬ ಪ್ರಜೆಯಲ್ಲೂ ಸಮರ್ಪಣಾ ಭಾವವಿರಬೇಕು ಎಂದು ನುಡಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಮಾಸ್ಟರ್ ಮೆಹಮೂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮೂಹ ಶಿಕ್ಷಣ ಸಂಸ್ಥೆಯ ಸಲಹಾ ಮಂಡಳಿಯ ಸದಸ್ಯರಾದ ಮಾಧವ ಎಂ. ಪೂಜಾರಿ, ಧರ್ಮದರ್ಶಿಗಳು ಚಕ್ರೇಶ್ವರಿ ಕೋಡಿ, ನಾಗರಾಜ ಕಾಂಚನ್, ಯುಸೂಫ್ ಕೋಡಿ, ರಫೀಕ್ ಕೋಡಿ, ಅಬು ಶೇಕ್ ಹಂಗಳೂರು, ಅಬ್ದುಲ್ಲಾ ಕೋಡಿ, ಪುರಸಭಾ ಸದಸ್ಯೆ ಜ್ಯೋತಿ ಹಾಗೂ ಬ್ಯಾರೀಸ್ ಅಂಗಸಂಸ್ಥೆಗಳ ಎಲ್ಲಾ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಸಂದೀಪ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕ ಜಯಶೀಲ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕ ಸುರೇಂದ್ರ ಶೆಟ್ಟಿ ವಂದಿಸಿದರು.